![Breaking news: ಮೇಕೆದಾಟು ಯೋಜನೆಗೆ ಒತ್ತಾಯಿಸಿ ನಡೆಸುತ್ತಿರುವ ಕಾಂಗ್ರೆಸ್ ಪಾದಯಾತ್ರೆ ತಕ್ಷಣ ನಿಲ್ಲಿಸುವಂತೆ ರಾಜ್ಯ ಸರ್ಕಾರದ ಆದೇಶ Breaking news: ಮೇಕೆದಾಟು ಯೋಜನೆಗೆ ಒತ್ತಾಯಿಸಿ ನಡೆಸುತ್ತಿರುವ ಕಾಂಗ್ರೆಸ್ ಪಾದಯಾತ್ರೆ ತಕ್ಷಣ ನಿಲ್ಲಿಸುವಂತೆ ರಾಜ್ಯ ಸರ್ಕಾರದ ಆದೇಶ](https://blogger.googleusercontent.com/img/b/R29vZ2xl/AVvXsEh-VLuuGqF0Qawgz5_Rgs7z2-vDex_46V5QWkIQSfjHmqlIJBIurLBePCvtFGqw7P_NseayMYKYTBAUhOHS0_ZSZ-kymiBR0d7b2u9i7S4oNmxdRD7Sqq6l0rq1_J8PB9LR5eanE-S5aFs/s1600/1642003135787755-0.png)
Breaking news: ಮೇಕೆದಾಟು ಯೋಜನೆಗೆ ಒತ್ತಾಯಿಸಿ ನಡೆಸುತ್ತಿರುವ ಕಾಂಗ್ರೆಸ್ ಪಾದಯಾತ್ರೆ ತಕ್ಷಣ ನಿಲ್ಲಿಸುವಂತೆ ರಾಜ್ಯ ಸರ್ಕಾರದ ಆದೇಶ
Wednesday, January 12, 2022
ಬೆಂಗಳೂರು: ಮೇಕೆದಾಟು ಯೋಜನೆಗೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪಾದಯಾತ್ರೆಗೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ.
ಕೊರೋನಾ ಟೈಂ ನಲ್ಲಿ ಪಾದಯಾತ್ರೆ ವಿಚಾರವಾಗಿ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪಾದಯಾತ್ರೆಗೆ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ.
ಮೇಕೆದಾಟು ಪಾದಯಾತ್ರೆಗೆ ಹೇಗೆ ಅನುಮತಿ ಕೊಟ್ರಿ, ಅನುಮತಿ ಕೊಟ್ಟಿಲ್ಲವೆಂದರೆ ಅದನ್ನು ತಡೆಯಲು ಯಾಕೆ ತಡ ಮಾಡುತ್ತಿದ್ದೀರಿ? ಎಂದು ಪ್ರಶ್ನಿಸಿದ ಹೈಕೋರ್ಟ್ ಸರಕಾರಕ್ಕೆ ಛೀಮಾರಿ ಹಾಕಿತ್ತು. ಹೀಗಾಗಿ ಸರ್ಕಾರ ತಕ್ಷಣಕ್ಕೆ ಜಾರಿ ಬರುವಂತೆ ಪಾದಯಾತ್ರೆಗೆ ನಿರ್ಬಂಧ ಹೇರಿದೆ.