ಬ್ರೇಕಿಂಗ್: ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಆದೇಶ ವಾಪಸ್:ಮುಖ್ಯಮಂತ್ರಿ ಅಧಿಕೃತ ಘೋಷಣೆ(weekend curfew withdraw)

ಬ್ರೇಕಿಂಗ್: ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಆದೇಶ ವಾಪಸ್:ಮುಖ್ಯಮಂತ್ರಿ ಅಧಿಕೃತ ಘೋಷಣೆ(weekend curfew withdraw)

ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಜಾರಿಗೊಳಿಸಲಾಗಿದ್ದ ವೀಕೆಂಡ್ ಕರ್ಪ್ಯೂವನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ.

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಅಧಿಕಾರಿಗಳು ಹಾಗೂ ತಜ್ಞರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವೀಕೆಂಡ್ ಕರ್ಪ್ಯೂ ಬದಲಾಗಿ ನಿಯಮಗಳನ್ನು ಬಿಗಿಗೊಳಿಸಬೇಕು. ಆಸ್ಪತ್ರೆಗಳಲ್ಲಿ ಇನ್ನೂ ಹೆಚ್ಚಿನ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.

ಪಾಸಿಟಿವಿಟಿ ಪ್ರಮಾಣ ಜಾಸ್ತಿ ಇದ್ದರೂ ಸಾವಿನ ಪ್ರಮಾಣ ಕಡಿಮೆ ಇರುವ ಹಿನ್ನೆಲೆಯಲ್ಲಿ ವಾರಂತ್ಯ ಕರ್ಪ್ಯೂ ವಾಪಸ್ ಪಡೆಯಲು ಸಭೆಯಲ್ಲಿ ನಿರ್ಧರಿಸಲಾಗಿದೆ.

Ads on article

Advertise in articles 1

advertising articles 2

Advertise under the article