![ಮಂಗಳೂರು: ಪಿಎಫ್ಐ, ಎಸ್ಡಿಪಿಐ ಕಚೇರಿ ಮೇಲೆ NIA (ರಾಷ್ಟ್ರೀಯ ತನಿಖಾ ದಳ) ದಾಳಿ ಮಂಗಳೂರು: ಪಿಎಫ್ಐ, ಎಸ್ಡಿಪಿಐ ಕಚೇರಿ ಮೇಲೆ NIA (ರಾಷ್ಟ್ರೀಯ ತನಿಖಾ ದಳ) ದಾಳಿ](https://blogger.googleusercontent.com/img/b/R29vZ2xl/AVvXsEgw-9CEnnpoU_cKYhTPUArso1FZxwQP9MU2qSSzIrGC_qRoCiVoCDdrIOVr0p3yMA1M5rVqlrF3jxth9m6VtKv-8W3g42dOeRYV4RnEBHVTCWpkGRYw3SVNeCWI1-jJ5pE5a9lyyv_gLxQ/s1600/1663815495429462-0.png)
ಮಂಗಳೂರು: ಪಿಎಫ್ಐ, ಎಸ್ಡಿಪಿಐ ಕಚೇರಿ ಮೇಲೆ NIA (ರಾಷ್ಟ್ರೀಯ ತನಿಖಾ ದಳ) ದಾಳಿ
Wednesday, September 21, 2022
ಮಂಗಳೂರು: ಇಂದು ಬೆಳ್ಳಂ ಬೆಳಗ್ಗೆ ನಗರದ ನೆಲ್ಲಿಕಾಯಿ ರಸ್ತೆಯಲ್ಲಿರುವ ಪಿಎಫ್ಐ, ಎಸ್ಡಿಪಿಐ ಕಚೇರಿ ಮೇಲೆ ಎನ್ಐಎ ದಾಳಿ ನಡೆಸಿದೆ.
ಬಿಗಿ ಪೊಲೀಸ್ ಬಂದೋಬಸ್ತಿನಲ್ಲಿ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿದೆ. ಎನ್ಐಎ ದಾಳಿಯನ್ನು ಖಂಡಿಸಿ SDPI ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಎನ್ಐಎ ದಾಳಿಯ ವೇಳೆ ನೆಲ್ಲಿಕಾಯಿ ರಸ್ತೆಯನ್ನು ಪೊಲೀಸರು ಬಂದ್ ಮಾಡಿದ್ದಾರೆ. ಅರೆಮೀಸಲು ಪಡೆಯಿಂದ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.
ಇದೇ ವೇಳೆ ಪಿಎಫ್ಐ, ಎಸ್ಡಿಪಿಐ ಮುಖಂಡರ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಬಜೆ, ಜೋಕಟ್ಟೆ ಸೇರಿದಂತೆ ರಾಜ್ಯದ ಎಂಟು ಕಡೆಗಳಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.