![ಮಂಗಳೂರು: ಲಾರಿ ಢಿಕ್ಕಿಯಾಗಿ ವಾಕಿಂಗ್ ನಿರತ ವ್ಯಕ್ತಿ ಮೃತ್ಯು ಮಂಗಳೂರು: ಲಾರಿ ಢಿಕ್ಕಿಯಾಗಿ ವಾಕಿಂಗ್ ನಿರತ ವ್ಯಕ್ತಿ ಮೃತ್ಯು](https://blogger.googleusercontent.com/img/b/R29vZ2xl/AVvXsEgiHBKhyphenhyphen-F3Re83xDjqMoK8LOm6hZS9_UUEXarWCfDF8NGtSvx8s9S0xrWdvLJ4W5hJO8sMh7GT0SEZewKdd0chyAIyFLB2kmUOgPRkSVtklmqM7jDuzdp9kbYNLZpmP1Za7cVr9LyC0SY/s1600/1666772309230354-0.png)
ಮಂಗಳೂರು: ಲಾರಿ ಢಿಕ್ಕಿಯಾಗಿ ವಾಕಿಂಗ್ ನಿರತ ವ್ಯಕ್ತಿ ಮೃತ್ಯು
Wednesday, October 26, 2022
ಮಂಗಳೂರು: ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಕೊಟ್ಟಾರ ಚೌಕಿಯಲ್ಲಿ ಬುಧವಾರ ಮುಂಜಾನೆ ನಡೆದಿದೆ.
ಅಶೋಕನಗರದ ನಿವಾಸಿ 40-45 ವರ್ಷದ ವ್ಯಕ್ತಿ ಮೃತಪಟ್ಟ ದುರ್ದೈವಿ.
ಅವರು ತಮ್ಮ ಆ್ಯಕ್ಟಿವಾ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ವಾಕಿಂಗ್ ನಿರತರಾಗಿದ್ದರು. ಈ ವೇಳೆ ಹರ್ಯಾಣದ ನೋಂದಣಿಯ ಲಾರಿಯೊಂದು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಪಾದಚಾರಿ ವ್ಯಕ್ತಿಯು ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಈ ಬಗ್ಗೆ ಸಂಚಾರ ಉತ್ತರ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.