ಮಂಗಳೂರು: ಕೆಎಸ್ಆರ್ ಟಿಸಿಯಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ

ಮಂಗಳೂರು: ಕೆಎಸ್ಆರ್ ಟಿಸಿಯಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ


ಮಂಗಳೂರು: ನಗರದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿ ಆತಂಕಕಾರಿ ವಾತಾವರಣ ಸೃಷ್ಟಿಯಾಗಿರುವ ಘಟನೆ ಇಂದು ಮಧ್ಯಾಹ್ನದ ಸುಮಾರಿಗೆ ನಡೆದಿದೆ.

ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗುತ್ತಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ತಕ್ಷಣ ಬಾಂಬ್ ಸ್ಕಾಡ್, ಶ್ವಾನದಳ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದೆ. ಆದರೆ ಅಷ್ಟರಲ್ಲಾಗಲೇ ಬ್ಯಾಗ್ ನ ವಾರಸುದಾರ ಪತ್ತೆಯಾಗಿದ್ದಾರೆ. ಅದು ಅಲ್ಲಿಯೇ ಇದ್ದ ಓರ್ವ ಪ್ರಯಾಣಿಕನ ಬ್ಯಾಗ್ ಎಂದು ತಿಳಿದು ಬಂದಿದೆ. ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗುತ್ತಲೇ ಕೊಂಚ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಆದರೆ ಪ್ರಕರಣದ ಸತ್ಯಾಸತ್ಯತೆ ತಿಳಿದು ಪರಿಸ್ಥಿತಿ ನಿರಾಳವಾಗಿದೆ.

Ads on article

Advertise in articles 1

advertising articles 2

Advertise under the article