ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಮನದೀಪ್ ರಾಯ್  ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಮನದೀಪ್ ರಾಯ್ ಇನ್ನಿಲ್ಲ

ಸ್ಯಾಂಡಲ್ ವುಡ್ ನ ಹಿರಿಯ ಹಾಸ್ಯ ನಟ ಮನದೀಪ್ ರಾಯ್ ಇಂದು(ಭಾನುವಾರ) ಬೆಳಿಗ್ಗೆ ನಿಧನರಾಗಿದ್ದಾರೆ.

ಇತ್ತೀಚೆಗೆ ಹೃದಯಾಘಾತವಾಗಿ ಆಸ್ಪತ್ರೆ ಸೇರಿದ್ದ ಮನದೀಪ್‌ ರಾಯ್‌ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಚೇತರಿಕೆ ಬಳಿಕ ಮನೆಗೆ ವಾಪಸ್‌ ಆಗಿದ್ದ ಅವರು ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ. 
1949ರಲ್ಲಿ ಜನಿಸಿದ ಮನದೀಪ್‌ ರಾಯ್‌ 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ. ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಇವರು ಹಲವು ದಶಕಗಳಿಂದ ಹಾಸ್ಯ ಕಲಾವಿದರಾಗಿ ರಂಜಿಸಿದ್ದಾರೆ.ಬೆಳದಿಂಗಳ ಬಾಲೆ, ಆಪ್ತರಕ್ಷಕ, ಪುಷ್ಪಕ ವಿಮಾನ, ಮಿಂಚಿನ ಓಟ , ಬೆಂಕಿಯ ಬಲೆ, ಆಕಸ್ಮಿಕ, ಏಳು ಸುತ್ತಿನ ಕೋಟೆ, ಆಸೆಗೊಬ್ಬ ಮೀಸೆಗೊಬ್ಬ, ಆಪ್ತ ರಕ್ಷಕ , ಆಂಟಿ ಪ್ರೀತ್ಸೆ , ಪ್ರೀತ್ಸೋದ್ ತಪ್ಪಾ ಹೀಗೆ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಡಾ.ರಾಜ್ ಕುಮಾರ್ ಅವರಿಂದ ಹಿಡಿದು ಹೊಸ ಕಿರಿಯ ಕಲಾವಿದರೊಂದಿಗೆ ಎಲ್ಲಾ ದಿಗ್ಗಜರ ಜೊತೆಯೂ ನಟಿಸಿರುವ ಹೆಗ್ಗಳಿಕೆ ಇವರದ್ದು.

Ads on article

Advertise in articles 1

advertising articles 2

Advertise under the article