Mangalore: ಚಿಪ್ಸ್ ತಯಾರಿಕಾ ಫ್ಯಾಕ್ಟರಿ ಬೆಂಕಿಗಾಹುತಿ;ಯೆಯ್ಯಾಡಿ ಕೈಗಾರಿಕಾ ಸಂಕೀರ್ಣದಲ್ಲಿ ನಡೆದ ಘಟನೆ

Mangalore: ಚಿಪ್ಸ್ ತಯಾರಿಕಾ ಫ್ಯಾಕ್ಟರಿ ಬೆಂಕಿಗಾಹುತಿ;ಯೆಯ್ಯಾಡಿ ಕೈಗಾರಿಕಾ ಸಂಕೀರ್ಣದಲ್ಲಿ ನಡೆದ ಘಟನೆ

ಮಂಗಳೂರು: ನಗರದ ಯೆಯ್ಯಾಡಿ ಕೈಗಾರಿಕಾ ವಲಯದಲ್ಲಿ ಬೆಂಕಿ ಆಕಸ್ಮಿಕ ನಡೆದಿದೆ. ಚಿಪ್ಸ್ ತಯಾರಿಕ ಕಾರ್ಖಾನೆಯಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿದ್ದು ಭಾರೀ ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ.

ಸಂಜೆ 5 ಗಂಟೆ ವೇಳೆಗೆ ನೋಡ ನೋಡುತ್ತಲೇ ಫ್ಯಾಕ್ಟರಿ ಧಗ ಧಗನೆ ಹೊತ್ತಿ ಉರಿದಿದೆ. ಏಸ್ ಫುಡ್ಸ್ ಪ್ರೈವೇಟ್ ಲಿ. ಹೆಸರಿನ ಚಿಪ್ಸ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಉಂಟಾಗಿದ್ದು ಒಳಗೆ ದಾಸ್ತಾನು ಮಾಡಿದ್ದ ಚಿಪ್ಸ್ ಇನ್ನಿತರ ಆಹಾರ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
ಅಗ್ನಿ ಅವಘಡ ಸ್ಥಳಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.‌  ಅಗ್ನಿ ಶಾಮಕದಳ ಇಲಾಖೆಯ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಂದ ಶಾಸಕರು ಮಾಹಿತಿ ಪಡೆದು ತಕ್ಷಣವೇ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
ಅಗ್ನಿಶಾಮಕದಳ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದೆ.

Ads on article

Advertise in articles 1

advertising articles 2

Advertise under the article