ಬೆಳ್ತಂಗಡಿ: ಪಿಕ್ ಅಪ್ ಢಿಕ್ಕಿಯಾಗಿ ಬೈಕ್ ಸವಾರ ವಿದ್ಯಾರ್ಥಿ ದುರ್ಮರಣ

ಬೆಳ್ತಂಗಡಿ: ಪಿಕ್ ಅಪ್ ಢಿಕ್ಕಿಯಾಗಿ ಬೈಕ್ ಸವಾರ ವಿದ್ಯಾರ್ಥಿ ದುರ್ಮರಣ


ಬೆಳ್ತಂಗಡಿ: ಪಿಕಪ್ ಢಿಕ್ಕಿ ಹೊಡೆದು ಬೈಕ್ ಸವಾರ ವಿದ್ಯಾರ್ಥಿಯೋರ್ವನು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಕೊಕ್ರಾಡಿ ಎಂಬಲ್ಲಿ ಸಂಭವಿಸಿದೆ.

ಕೊಕ್ರಾಡಿ ನಿವಾಸಿ ಉಜ್ವಲ್ ಹೆಗ್ಡೆ (19) ಮೃತಪಟ್ಟ ವಿದ್ಯಾರ್ಥಿ.

ಮನೆಯಿಂದ ಮೂಡಬಿದಿರೆಯ ಕಾಲೇಜಿಗೆಂದು ಉಜ್ವಲ್ ಹೆಗ್ಡೆ ಬೈಕ್ ನಲ್ಲಿ ಹೊರಟಿದ್ದರು.‌ ಈ ವೇಳೆ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಪಿಕಪ್ ವಾಹನ ಬೈಕಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಪಿಕಪ್ ಚಾಲಕ ಹರೀಶ್ ಪೂಜಾರಿ ಎಂಬಾತ ಅಜಾಗರೂಕತೆ ಹಾಗೂ ಅತಿ ವೇಗವಾಗಿ ವಾಹನ ಚಲಾಯಿಸಿಕೊಂಡು ಬಂದು ಬೈಕಿಗೆ ಢಿಕ್ಕಿ ಹೊಡೆದಿದ್ದಾನೆ. ಢಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಉಜ್ವಲ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕೊಂಡೊಯ್ದರೂ ಈ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಮೃತಪಟ್ಟ ವಿದ್ಯಾರ್ಥಿ ತಂದೆ - ತಾಯಿ ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article