ಮಂಗಳೂರು: ನಗರ ಪೊಲೀಸ್ ಕಮಿಷನರ್ ಆಗಿ ಕುಲದೀಪ್ ಕುಮಾರ್ ಜೈನ್ ಅಧಿಕಾರ ಸ್ವೀಕಾರ

ಮಂಗಳೂರು: ನಗರ ಪೊಲೀಸ್ ಕಮಿಷನರ್ ಆಗಿ ಕುಲದೀಪ್ ಕುಮಾರ್ ಜೈನ್ ಅಧಿಕಾರ ಸ್ವೀಕಾರ


ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ನೂತನ ಕಮಿಷನರ್ ಆಗಿ ಕುಲದೀಪ್ ಕುಮಾರ್ ಆರ್. ಜೈನ್ ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಕುಲದೀಪ್ ಕುಮಾರ್ ಆರ್. ಜೈನ್ ಹುಟ್ಟಿದ್ದು ರಾಜಸ್ತಾನದಲ್ಲಿ ಬೆಳೆದಿದ್ದು, ಶಿಕ್ಷಣ ಪೂರೈಸಿದ್ದು ಚೆನ್ನೈನಲ್ಲಿ‌. 2011 ಬ್ಯಾಚ್ ನ ಐಪಿಎಸ್ ಅಧಿಕಾರಿ. ಅವರ ಪ್ರೊಬೆಷನರಿ ಅವಧಿ ಮಂಗಳೂರು ಆಗಿದ್ದು, ಆ ಬಳಿಕ ಚೆನ್ನಪಟ್ಟಣ ಎಎಸ್ಪಿ, ಚಾಮರಾಜನಗರ, ಬಿಜಾಪುರದಲ್ಲಿ ಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದರು‌. ಬೆಂಗಳೂರು ಸಿಟಿಯಲ್ಲಿ ಡಿಸಿಪಿ ಕ್ರೈಂ ಹಾಗೂ ಡಿಸಿಪಿ ಟ್ರಾಫಿಕ್ ಆಗಿದ್ದು ಕೆಎಸ್ಆರ್ ಪಿ ಹಾಗೂ ಎಸಿಬಿಯಲ್ಲಿ ಕಾರ್ಯ ನಿರ್ವಹಿಸಿದ್ದರು.
ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಅವರು, 10ವರ್ಷಗಳ ಹಿಂದೆ ಪ್ರೊಬೆಷನರಿ ಅವಧಿಯಲ್ಲಿ ಮಂಗಳೂರಿನಲ್ಲಿಯೇ ಇದ್ದೆ. ಈಗ ಮಂಗಳೂರು ಬಹಳಷ್ಟು ಬದಲಾವಣೆ ಆಗಿದೆ. ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ಇದ್ದಲ್ಲಿ ತಕ್ಷಣ ಕ್ರಮಕೈಗೊಳ್ಳಲಾಗುತ್ತಾದೆ. ಯಾರು ಅದಕ್ಕೆ ಹೊಣೆಗಾರರು ಇರುತ್ತಾರೋ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಮಂಗಳೂರು ಸೂಕ್ಷ್ಮ ಪ್ರದೇಶವಾಗಿದ್ದರೆ, ನಾನೂ ಅಷ್ಟೇ ಸೂಕ್ಷ್ಮವಾಗಿ ಎಲ್ಲಾ ವಿಚಾರಗಳನ್ನು ತಿಳಿದುಕೊಳ್ಳಲು ಪ್ರಯತ್ನ ಪಡುತ್ತೇನೆ. ಹಾಗೆಯೇ ಯಾವ ರೀತಿಯಲ್ಲಿ ಕ್ರಮಗಳು ಆಗಬೇಕೋ ಅದು ಆಗುತ್ತದೆ ಎಂದು ಹೇಳಿದರು.

ನನ್ನ ಅವಧಿಯಲ್ಲಿ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರಕ್ಕೆ ಯಾವುದೇ ಅವಕಾಶ ಇರುವುದಿಲ್ಲ. ಭ್ರಷ್ಟಾಚಾರಕ್ಕೆ ಅವಕಾಶ ನೀಡದಂತೆ ಪೊಲೀಸ್ ಅಧಿಕಾರಿ, ಸಿಬ್ಬಂದಿಯನ್ನೂ ಕೇಳಿಕೊಳ್ಳುತ್ತಿದ್ದೇನೆ. ಜನಸಾಮಾನ್ಯರಿಗೆ ಎಷ್ಟು ಅನುಕೂಲ ಕೆಲಸಗಳು ಆಗುತ್ತದೆಯೋ ಅಷ್ಟು ಮಾಡಬೇಕು. ಈ ಬಗ್ಗೆ ಅಧಿಕಾರಿ, ಸಿಬ್ಬಂದಿಯ ಕಾರ್ಯಚಟುವಟಿಕೆಗಳನ್ನು ನಾನೇ ವೀಕ್ಷಿಸುತ್ತೇನೆ. ಟ್ರಾಫಿಕ್ ರೂಲ್ ಬ್ರೇಕ್ ಮಾಡುತ್ತಿರುವವರ ಮೇಲೆ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗುತ್ತದೆ ಎಂದರು.

Ads on article

Advertise in articles 1

advertising articles 2

Advertise under the article