![ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ-ಆರೋಪಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ-ಆರೋಪಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು](https://blogger.googleusercontent.com/img/b/R29vZ2xl/AVvXsEiEDg19GZcIfBKKdoSlmNMgOGVIgWMmlFzSs8L6uo3-6auO2Crm_JVbpVXnkl1pNu5QCahkaFvjHCx4fcq3B7jMgWdtOlv771uMOlnjRgCdjIM71wrtpCs9yhC59gWeqZCNmcD-ZVY0PZ4/s1600/1680155822724393-0.png)
ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ-ಆರೋಪಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು
Wednesday, March 29, 2023
ಹುಣಸೂರು: ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಗೆ ಸ್ಥಳೀಯರು ಸೇರಿಕೊಂಡು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ್ದಾರೆ.
ಹುಣಸೂರಿನ ಉಯಿಗೊಂಡನಹಳ್ಳಿ ನಿವಾಸಿ ಮಹದೇವ(57) ಅತ್ಯಾಚಾರಕ್ಕೆ ಯತ್ನಿಸಿದವ.
ಈತ ಬುದ್ದಿ ಮಾಂದ್ಯ ಯುವತಿಯನ್ನು ಬಲತ್ಕಾರದಿಂದ ಅತ್ಯಾಚಾರ ನಡೆಸಲೆತ್ನಿಸಿದ ವೇಳೆ ಬಾಲಕಿ ಕೂಗಿಕೊಂಡಿದ್ದಾಳೆ . ಕೂಗಾಟ ಕೇಳಿದ ಗ್ರಾಮಸ್ಥರು ದೌಡಾಯಿಸಿದ್ದಾರೆ. ಅತ್ಯಾಚಾರಕ್ಕೆ ಯತ್ನಿಸುತ್ತಿದ್ದ ವೇಳೆ ಆರೋಪಿಯನ್ನು ಗ್ರಾಮಸ್ಥರು ಹಿಡಿದು ಧರ್ಮದೇಟು ಕೊಟ್ಟು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಗ್ರಾಮಸ್ಥರು ನೀಡಿದ ಧರ್ಮದೇಟಿನಿಂದ ಅಸ್ವಸ್ಥನಾಗಿದ್ದ ಮಹದೇವನನ್ನು ಹುಣಸೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಕೆ.ಆರ್. ಆಸ್ಪತ್ರೆಗೆ ಸೇರಿಸಿದ್ದಾರೆ.
ಹುಣಸೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.