ಚೈತ್ರಾ ಕುಂದಾಪುರ ಕೋಟಿ ಕೋಟಿ ವಂಚನೆ ಪ್ರಕರಣ-  ಗುರುಪುರ ಸ್ವಾಮೀಜಿಗೆ ಸಿಸಿಬಿ ನೋಟೀಸ್

ಚೈತ್ರಾ ಕುಂದಾಪುರ ಕೋಟಿ ಕೋಟಿ ವಂಚನೆ ಪ್ರಕರಣ- ಗುರುಪುರ ಸ್ವಾಮೀಜಿಗೆ ಸಿಸಿಬಿ ನೋಟೀಸ್


ಮಂಗಳೂರು: ಚೈತ್ರಾ ಕುಂದಾಪುರ ಕೋಟಿ‌ ಕೋಟಿ ರೂ  ವಂಚನೆ ಮಾಡಿದ  ಪ್ರಕರಣದಲ್ಲಿ   ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರಿಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಸಿಸಿಬಿ ಪೊಲೀಸರು ನೋಟೀಸ್ ನೀಡಿದ್ದಾರೆ.

 ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ  ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಕಳುಹಿಸಿದ ನೋಟೀಸ್ ತಲುಪಿದೆ. ಇನ್ನೆರಡು ದಿನಗಳೊಳಗೆ ವಕೀಲರ ಜೊತೆಗೆ ಬೆಂಗಳೂರು ಸಿಸಿಬಿ ಕಚೇರಿಗೆ ತೆರಳಿ ವಿಚಾರಣೆಗೆ ತೆರಳುವುದಾಗಿ  ಅವರು ತಿಳಿಸಿದ್ದಾರೆ.

ಚೈತ್ರ ಕುಂದಾಪುರ ವಂಚನೆ ಪ್ರಕರಣದಲ್ಲಿ ಗುರುಪುರ  ಸ್ವಾಮೀಜಿ  ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಹಿಂದೆಯೆ ಸ್ವಾಮೀಜಿ ಈ ಪ್ರಕರಣದಲ್ಲಿ ತಾನು ಇಲ್ಲ ಎಂದು ಸ್ಪಷ್ಟನೆಯನ್ನು ನೀಡಿದ್ದರು.

Ads on article

Advertise in articles 1

advertising articles 2

Advertise under the article