ಮಂಗಳೂರು: ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡ ಕರ್ಣಾಟಕ ಬ್ಯಾಂಕ್  ಹಿರಿಯ ಅಧಿಕಾರಿ

ಮಂಗಳೂರು: ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡ ಕರ್ಣಾಟಕ ಬ್ಯಾಂಕ್ ಹಿರಿಯ ಅಧಿಕಾರಿ


ಕರ್ಣಾಟಕ ಬ್ಯಾಂಕ್ ನ ಹಿರಿಯ ಹಿರಿಯ ಅಧಿಕಾರಿಯೊಬ್ಬರು ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಯನ್ನು ವಾದಿರಾಜ್(55) ಎಂದು ಹೇಳಲಾಗಿದೆ

ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಇವರು ಚಾಕುವಿನಿಂದ ಹೊಟ್ಟೆ ಹಾಗೂ ಕೊರಳಿಗೆ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಮನೆಮಂದಿ ಬಂದು ನೋಡಿದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ವಾದಿರಾಜ್ ಅವರಿಗೆ ಪತ್ನಿ, ಹಾಗೂ ಇಬ್ಬರು ಮಕ್ಕಳಿದ್ದು. ಬೆಳಿಗ್ಗೆ ಮಕ್ಕಳು ಕಾಲೇಜಿಗೆ ತೆರಳಿದ್ದು ಪತ್ನಿ ಕೂಡಾ ಮನೆಯಲ್ಲಿ ಇರದ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗಿದೆ.

Ads on article

Advertise in articles 1

advertising articles 2

Advertise under the article