ಡಾ.ಧನಂಜಯ ಸರ್ಜಿ ಪದವೀಧರರ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸಲಿದ್ದಾರೆ - ಕುಮಾರ್ ಬಂಗಾರಪ್ಪ ವಿಶ್ವಾಸ

ಡಾ.ಧನಂಜಯ ಸರ್ಜಿ ಪದವೀಧರರ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸಲಿದ್ದಾರೆ - ಕುಮಾರ್ ಬಂಗಾರಪ್ಪ ವಿಶ್ವಾಸ


ಆನವಟ್ಟಿ: ಡಾ.ಧನಂಜಯ ಸರ್ಜಿಯವರ ವೈದ್ಯವೃತ್ತಿಯ ಅನುಭವ ಹಾಗೂ ಪದವೀಧರರ ಸಂಪೂರ್ಣ ಸಮಸ್ಯೆಗಳ ಅರಿವು ಅವರಿಗಿದೆ. ಆದ್ದರಿಂದ ಅವರನ್ನು ವಿಧಾನ ಪರಿಷತ್ ಗೆ ಆಯ್ಕೆ ಮಾಡಿದರೆ ಪದವೀಧರರು ಮತ್ತು ಶಿಕ್ಷಕರ ಸಮಸ್ಯೆಗಳಿಗೆ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದರು.

ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆಯ ಹಿನ್ನೆಲೆಯಲ್ಲಿ ವಾಸವಿ ಕಲ್ಯಾಣ ಮಂಟಪದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸೊರಬ ಮಂಡಲ ಮತದಾರರ ಮತ್ತು ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿ, ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಅವರ ಗೆಲುವಿಗಾಗಿ ಎಲ್ಲ ಮುಖಂಡರು, ಕಾರ್ಯಕರ್ತರು ಒಂದಾಗಿ ಶ್ರಮಿಸೋಣ. ಈ ಹಿಂದೆ ಬಿಜೆಪಿಯಲ್ಲಿದ್ದುಕೊಂಡು ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದ ಆಯನೂರು ಮಂಜುನಾಥ್ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮತ ಕೇಳುತ್ತಿದ್ದಾರೆ. ಅಂದರೆ ಕಳೆದ ಚುನಾವಣೆಯಲ್ಲಿ ಮತ ನೀಡಿದ ಪದವೀಧರ ಮತದಾರರನ್ನು ತಿರಸ್ಕರಿಸಿದ್ದಾರೆ ಎಂದರ್ಥ ಎಂದು ಟೀಕಿಸಿದರು.  

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ಹುಟ್ಟಿದಾಗ ಉಸಿರಿರುತ್ತೆ, ಹೆಸರಿರೋದಿಲ್ಲ, ಸಾಯುವಾಗ ಹೆಸರಿರುತ್ತೆ ಉಸಿರಿರೋದಿಲ್ಲ. ಈ ಉಸಿರು ಮತ್ತು ಹೆಸರಿನ ನಡುವೆ ಇರುವ ಜೀವನ ಮತ್ತು ಕಾಲವನ್ನು ನಾವು ಸಾಧನೆ ಮಾಡುವ ಮೂಲಕ, ನಿಸ್ವಾರ್ಥ ಸಮಾಜ ಸೇವೆ ಮಾಡುವ ಮೂಲಕ ಸಾರ್ಥಕಗಳಿಸಿಕೊಳ್ಳಬೇಕು. ಜನಸೇವೆ ಸೇವೆ ಮಾಡಬೇಕೆಂಬ ತುಡಿತದಿಂದ ಈ ಕ್ಷೇತ್ರಕ್ಕೆ ಬಂದಿದ್ದೇನೆ, ವಿಧಾನ ಪರಿಷತ್ ಪ್ರವೇಶಿಸಿ ಪದವೀಧರರ ಸೇವೆ ಮಾಡುವ ಅವಕಾಶವನ್ನು ತಾವೆಲ್ಲರೂ ಮಾಡಿಕೊಡಬೇಕೆಂದು ಮನವಿ ಮಾಡಿದರು.  
ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಮಂಡಲ ಅಧ್ಯಕ್ಷರಾದ ಪ್ರಕಾಶ್,  ರಾಜ್ಯ ಪ್ರಕೋಷ್ಟಗಳ ಸಂಯೋಜಕ ಎಸ್.ದತ್ತಾತ್ರಿಯವರು ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಾಲತೇಶ್, ಓಬಿಸಿ ಮೋರ್ಚಾದ ಅಧ್ಯಕ್ಷ ಎಂ. ಡಿ. ಉಮೇಶ್ , ತಾಲ್ಲೂಕು ಮುಖಂಡ ದೇವೇಂದ್ರಪ್ಪ, ಮಂಡಲದ ಅಧ್ಯಕ್ಷ ಪ್ರಕಾಶಣ್ಣ ತಲಕಾಲಕೊಪ್ಪ, ಮಂಡಲದ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಕಡಸೂರು ಮುಖಂಡ ಗೀತಾ ಮಲ್ಲಿಕಾರ್ಜುನ, ಗುರುಕುಮಾರ ಪಾಟೀಲ್, ಕೊಟ್ರೇಶ್ ಹಾಗೂ ಭಾರತೀಯ ಜನತಾ ಪಾರ್ಟಿಯ ಎಲ್ಲಾ ಮುಖಂಡರು ಹಾಗೂ ಪದವೀಧರ ಕ್ಷೇತ್ರದ ಮತದಾರರು ಭಾಗವಹಿಸಿದ್ದರು.

Ads on article

Advertise in articles 1

advertising articles 2

Advertise under the article