ಮಂಗಳೂರು: ವಿಧಾನ ಪರಿಷತ್ ಚುನಾವಣೆ - ದ.ಕ.ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಸಭೆ

ಮಂಗಳೂರು: ವಿಧಾನ ಪರಿಷತ್ ಚುನಾವಣೆ - ದ.ಕ.ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಸಭೆ


ಮಂಗಳೂರು: ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಸಭೆ ಸೋಮವಾರ ನಗರದ ಡೊಂಗರಕೇರಿಯ ಕೆನರಾ ಶಾಲೆಯ ಸುಧೀಂದ್ರ ಸಭಾಂಗಣದಲ್ಲಿ ನಡೆಯಿತು.

ಸಭೆಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಭೋಜೇಗೌಡ ಓರ್ವ ನುರಿತ ರಾಜಕಾರಣಿ. ಅವರ ಮಾತುಗಳು ಕೇಳ್ತಿದ್ರೆ ಅವರು ಬಾಲ್ಯದಲ್ಲಿ ಸ್ವಯಂ ಸೇವಕ ಆಗಿರಬೇಕು ಅನಿಸುತ್ತದೆ‌. ಡಾ.ಧನಂಜಯ ಸರ್ಜಿ ಹೊಟ್ಟೆ ಪಾಡಿಗಾಗಿ ರಾಜಕಾರಣಕ್ಕೆ ಬಂದವರಲ್ಲ. ಅವರು ಮಾಡಿರುವ ಸೇವೆಯ ಕಾರಣಕ್ಕೆ ಜನರು ಅವರನ್ನು ಗುರುತಿಸಿದ್ದಾರೆ ಎಂದರು.

ಸಭೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ, ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಬೋಜೇಗೌಡ, ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿದರು.

ಸಭೆಯಲ್ಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್, ಶಾಸಕರಾದ ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ಹರೀಶ್ ಪೂಂಜ, ಮಂಗಳೂರು ಬಿಜೆಪಿ ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ,  ಬಿಜೆಪಿ ಪ್ರಮುಖರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಬಿಜೆಪಿ ಪ್ರಮುಖರು ಮತ್ತು ಜೆಡಿಎಸ್ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article