ಮೈತ್ರಿ ಅಭ್ಯರ್ಥಿಗಳ ಪರ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಮತಯಾಚನೆ
Tuesday, May 28, 2024
ಉಡುಪಿ: ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣಾ ಅಭ್ಯರ್ಥಿಗಳಾದ ಡಾ. ಧನಂಜಯ ಸರ್ಜಿ ಹಾಗೂ ಎಸ್. ಎಲ್. ಭೋಜೆಗೌಡ ಅವರ ಪರವಾಗಿ ಶಾಸಕ ಗುರುರಾಜ ಗಂಟಿಹೊಳೆ ಅವರು ಮತಯಾಚನೆ ಮಾಡಿದರು.
ಬೈಂದೂರು ವಿಧಾನಸಭಾ ಕ್ಷೇತ್ರದ ಶಂಕರನಾರಾಯಣ, ಉಳ್ಳೂರು -74 , ಸಿದ್ದಾಪುರ, ಹೊಸಂಗಡಿ, ಆಜ್ರಿ , ಕಾವ್ರಾಡಿ, ಗುಲ್ವಾಡಿ, ಕರ್ಕುಂಜೆ, ಹಟ್ಟಿಯoಗಡಿ, ತಲ್ಲೂರು ಗ್ರಾಪಂಗಳಿಗೆ ಶಾಸಕ ಗುರುರಾಜ ಗಂಟಿಹೊಳೆ, ಬೈಂದೂರು ಮಂಡಲದ ಪ್ರಧಾನ ಕಾರ್ಯದರ್ಶಿ ಉಮೇಶ ಶೆಟ್ಟಿ ಹಾಗೂ ಮಂಡಲದ ಅನೇಕ ಪದಾಧಿಕಾರಿಗಳನ್ನು ಭೇಟಿ ಮಾಡಿ ಆಯಾ ಗ್ರಾಮ ವ್ಯಾಪ್ತಿಯ ಪ್ರಮುಖರೊಂದಿಗೆ ಚುನಾವಣಾ ತಯಾರಿ ಬಗ್ಗೆ ಚರ್ಚಿಸಿದರು.