ಡಾ.ಧನಂಜಯ ಸರ್ಜಿ, ಎಸ್.ಎಲ್.ಭೋಜೇಗೌಡರಿಗೆ ಪಾಂಡೋಮಟ್ಟಿ ಶ್ರೀಗಳಿಂದ ಆಶೀರ್ವಾದ

ಡಾ.ಧನಂಜಯ ಸರ್ಜಿ, ಎಸ್.ಎಲ್.ಭೋಜೇಗೌಡರಿಗೆ ಪಾಂಡೋಮಟ್ಟಿ ಶ್ರೀಗಳಿಂದ ಆಶೀರ್ವಾದ


ಮಂಗಳೂರು: ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್. ಎಲ್. ಭೋಜೇಗೌಡ ಅವರು ಮಂಗಳವಾರ ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿಯ ವಿರಕ್ತಮಠಕ್ಕೆ ಭೇಟಿ  ನೀಡಿ ಶ್ರೀ ಗುರುಬಸವ ಮಹಾಸ್ವಾಮೀಜಿಗಳಿಂದ ಆಶೀರ್ವಾದ ಪಡೆದರು. 

ಈ ವೇಳೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಯುವ ನಾಯಕ ಮಾಡಾಳ್ ಮಲ್ಲಿಕಾರ್ಜುನ, ತುಮ್ಕೋಸ್ ಅಧ್ಯಕ್ಷ ರವಿಕುಮಾರ್, ಶಿವಮೊಗ್ಗ ಜಿಲ್ಲಾ ಬಿಜೆಪಿ ಖಜಾಂಚಿ ಎನ್.ಡಿ.ಸತೀಶ್, ಪ್ರಧಾನ ಕಾರ್ಯದರ್ಶಿ ಮಾಲತೇಶ್, ದಾವಣಗೆರೆ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಹರ್ಷ ಪಟೇಲ್, ತುಮ್ಕೋಸ್ ಮಾಜಿ ಅಧ್ಯಕ್ಷ ಎಚ್.ಎಸ್.ಶಿವಕುಮಾರ್, ಚನ್ನಗಿರಿ ಬಿಜೆಪಿ ಮುಖಂಡರಾದ ನಾಗರಾಜ್ ನಾಡಿಗ್, ಸಂಗಮ್ ಹಾಜರಿದ್ದರು.

Ads on article

Advertise in articles 1

advertising articles 2

Advertise under the article