ಮಂಗಳೂರು :ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಒಡವೆ ಬ್ಯಾಗ್ ಕಳ್ಳತನ!!!!

ಮಂಗಳೂರು :ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಒಡವೆ ಬ್ಯಾಗ್ ಕಳ್ಳತನ!!!!

ಮಂತ್ರಾಲಯದಿಂದ ಮಂಗಳೂರಿಗೆ ಬಸ್‌ನಲ್ಲಿ ಸಾಗಿಸುತ್ತಿದ್ದ 90 ಲಕ್ಷ ಒಡವೆ ಇರೋ ಬಂಗಾರದ ಚೀಲವನ್ನು ಖದೀಮರು ಕಳ್ಳತನ ಮಾಡಿರುವ ಘಟನೆ ಸಿಸಿ ಕ್ಯಾಮರಾದಲ್ಲಿ ಸಂಪೂರ್ಣವಾಗಿ ದಾಖಲಾಗಿದ್ದು, ನಾಲ್ಕು ಜನರಿಂದ ಈ ದರೋಡೆ ನಡೆದಿದೆ.
ಇದೀಗ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಈ ದರೋಡೆ ಪ್ರಕರಣದ ಮಾಸ್ಟರ್ ಮೈಂಡ್ ಸಿಂಧನೂರಿನಿಂದ ಸ್ಲೀಪರ್ ಕೋಚ್ ಬಸ್‌ನಲ್ಲಿ ಪ್ರಯಾಣಿಸಿ ಕೊಪ್ಪಳಕ್ಕೆ ಬಂದಿದ್ದಾನೆ. ಅದೇ ವೇಳೆ ಇನ್ನೂ ಮೂವರು ಖದೀಮರು ಬೇರೆ ವಾಹನದಲ್ಲಿ ಬಸ್‌ನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ಒಟ್ಟು ನಾಲ್ವರು ಸೇರಿಕೊಂಡು ಈ ದರೋಡೆ ಕೃತ್ಯವನ್ನು ಸಂಚು ರೂಪಿಸಿ ನಡೆಸಿದ್ದಾರೆ.

ಈ ದರೋಡೆ Tawa Punjab Hotel ಮುಂಭಾಗದಲ್ಲಿ ನಡೆದಿದೆ. ರಾ.ಹೆ 63 ಕ್ಕೆ ಹೊಂದಿಕೊಂಡಂತೆ ಇರುವ ತವ ಪಂಜಾಬ್ ಹೊಟೇಲ್. ಮಂತ್ರಾಲಯದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ ಕೊಪ್ಪಳ ಹೊರವಲಯದಲ್ಲಿ ಊಟಕ್ಕಾಗಿ ನಿಲ್ಲಿಸಲಾಗಿತ್ತು. ಆ ವೇಳೆ ಬಸ್‌ನಲ್ಲೇ ಮಲಗಿದ್ದ ಮಹಮ್ಮದ್ ಮತ್ತು ಇರ್ಷಾದ್ ಎಂಬ ಪ್ರಯಾಣಿಕರ ಬಳಿಯಿದ್ದ ಬಂಗಾರದ ಚೀಲವನ್ನು ಖದೀಮರು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ.

ಹೋಟೆಲ್ ಮುಂಭಾಗದಲ್ಲಿದ್ದ ಸಿಸಿ ಕ್ಯಾಮರದಲ್ಲಿ ಈ ದರೋಡೆ ಕೃತ್ಯದ ಸಂಪೂರ್ಣ ದೃಶ್ಯ ದಾಖಲಾಗಿದ್ದು, ಆರೋಪಿಗಳು ಹೇಗೆ ಬಸ್‌ಗೆ ಹತ್ತಿ ಬಂಗಾರದ ಚೀಲವನ್ನು ಕದ್ದುಕೊಂಡು ಹೋಗಿದ್ದಾರೆ ಎಂಬುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಅವರದ್ದೇ ಆಗ ಸಿಗ್ನಲ್‌ಗಳು ಒಬ್ಬೊಬ್ಬರಂತೆ ಬಂದು ಕಾಯುತ್ತಿರುವುದು ಕಂಡುಬಂದಿದೆ. ಈ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮಹಮ್ಮದ್ ಮತ್ತು ಇರ್ಷಾದ್ ಎಂಬವರು ಮಂತ್ರಾಲಯದಿಂದ ಮಂಗಳೂರಿಗೆ ಬಂಗಾರದೊಂದಿಗೆ ಪ್ರಯಾಣಿಸುತ್ತಿದ್ದರು. ಬಸ್ ಊಟಕ್ಕಾಗಿ ನಿಂತಿದ್ದ ವೇಳೆ ಅವರು ಮಲಗಿದ್ದ ಕಾರಣ ಖದೀಮರು ಈ ಅವಕಾಶವನ್ನು ಬಳಸಿಕೊಂಡು ದರೋಡೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಸಿ ಕ್ಯಾಮರಾ ದೃಶ್ಯಾವಳಿ ಹಾಗೂ ಬಸ್ ಪ್ರಯಾಣಿಕರ ಮಾಹಿತಿಯ ಆಧಾರದ ಮೇಲೆ ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ದರೋಡೆ ನಡೆಸಿದ ನಾಲ್ವರು ಖದೀಮರು ಯಾವ ದಿಕ್ಕಿಗೆ ಪರಾರಿಯಾಗಿದ್ದಾರೆ ಎಂಬುದರ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ.


Ads on article

Advertise in articles 1

advertising articles 2

Advertise under the article