ಮಧ್ಯಪ್ರದೇಶ :ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಗರ್ಭನಿರೋಧಕ ಮಾತ್ರೆ ತಿನ್ನಿಸಿದ ಯುವಕ: ಚಿಕಿತ್ಸೆ ವೇಳೆ ಹುಡುಗಿ ಸಾವು...!
ಮಧ್ಯಪ್ರದೇಶ : ಗರ್ಭನಿರೋಧಕ ಮಾತ್ರೆಗಳನ್ನು ಸೇವಿಸಿ ಬಾಲಕಿಯೊಬ್ಬರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಇನ್ಸ್ಟಾಗ್ರಾಮ್ನಲ್ಲಿ ಬೆಳೆದ ಸ್ನೇಹವು ಅಂತಿಮವಾಗಿ ತನ್ನ ಸಾವಿಗೆ ಕಾರಣವಾಗುತ್ತದೆ ಎಂದು ಬಾಲಕಿ ಊಹಿಸಿರಲಿಲ್ಲವೇನೋ.
ಘಟನೆಯ ಹಿನ್ನೆಲೆ: ಬಾಲಕಿ ಇತ್ತೀಚೆಗೆ ಮೋಮಿನ್ಪುರದಲ್ಲಿ ವಾಸಿಸುತ್ತಿರುವ 25 ವರ್ಷದ ವ್ಯಕ್ತಿಯೊಂದಿಗೆ ಸ್ನೇಹ ಬೆಳೆಸಿದ್ದಳು. ನಂತರ ಆ ವ್ಯಕ್ತಿ ಆಕೆಯನ್ನು ಹೋಟೆಲ್ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ಬಾಲಕಿ ಗರ್ಭಿಣಿಯಾದಾಗ ಆಕೆಗೆ ಗರ್ಭನಿರೋಧಕ ಮಾತ್ರೆಗಳನ್ನು ನೀಡಿದ್ದಾನೆ. ಅದನ್ನು ಸೇವಿಸಿದ ನಂತರ ಬಾಲಕಿ ಅಸಹನೀಯ ಹೊಟ್ಟೆ ನೋವಿನಿಂದ ಬಳಲಿದ್ದಾಳೆ. ಅವಳು ಗರ್ಭಿಣಿಯಾಗಿದ್ದಾಳೆ ಎಂದು ತಿಳಿದು ಬಂದಾಗ ಆಕೆಯ ಕುಟುಂಬದ ಸದಸ್ಯರು ಆಕೆಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಆಕೆಯ ಆರೋಗ್ಯ ಇನ್ನಷ್ಟು ಹದಗೆಟ್ಟಿದೆ. ಚಿಕಿತ್ಸೆ ಪಡೆಯುತ್ತಿರುವಾಗ ಬಾಲಕಿ ನಿಧನರಾಗಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಖಾಂಡ್ವಾ ಪೊಲೀಸರು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಜೈಲಿಗೆ ಕಳುಹಿಸಿದ್ದಾರೆ.
ಪ್ರಕರಣದ ಬಗ್ಗೆ ಪೊಲೀಸರು ಹೇಳಿದ್ದಿಷ್ಟು: ಠಾಣೆಯ ಉಸ್ತುವಾರಿ ಗಣೇಶ್ ಮಹಾಲೆ ಪ್ರಕರಣದ ಬಗ್ಗೆ ಮಾಹಿತಿ ನೀಡಿದ್ದು, 'ಸುಮಾರು ಒಂದೂವರೆ ತಿಂಗಳ ಹಿಂದೆ, ಯುವಕ ಬಾಲಕಿಯನ್ನು ತಾಪಿ ಸೇತುವೆ ಬಳಿಯಿರುವ ತಾಜ್ ಹೋಟೆಲ್ಗೆ ಕರೆದೊಯ್ದು ಅಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಅವಧಿಯಲ್ಲಿ ಹುಡುಗಿ ಗರ್ಭಿಣಿಯಾಗಿದ್ದಾಳೆ. ನಂತರ, ಅವಳಿಗೆ ಮಾತ್ರೆಗಳನ್ನು ನೀಡುವ ಮೂಲಕ ಗರ್ಭಪಾತ ಮಾಡಿಸಲು ಪ್ರಯತ್ನಿಸಿದ್ದಾನೆ. ಇದರಿಂದಾಗಿ ಅವಳು ಪ್ರಾಣ ಕಳೆದುಕೊಂಡಿದ್ದಾಳೆ. ಪ್ರಕರಣವನ್ನು ಗಣಪತಿ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಈ ಸಂಬಂಧ ಪೊಲೀಸರು ತಕ್ಷಣವೇ ಆರೋಪಿ ಮೋಮಿನ್ಪುರ ನಿವಾಸಿ ಗಣೇಶ್ ಚೌಧರಿ ಎಂಬುವವನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಅಲ್ಲಿಂದ ಆತನನ್ನು ಜೈಲಿಗೆ ಕಳುಹಿಸಲಾಗಿದೆ. ಹೋಟೆಲ್ ನಿರ್ವಾಹಕನ ವಿರುದ್ಧವೂ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಸಾಮಾಜಿಕ ಕಾರ್ಯಕರ್ತ ಓಂ ಆಜಾದ್, 17 ವರ್ಷದ ಬಾಲಕಿಯ ಮೇಲೆ ಘೋರ ಕ್ರೌರ್ಯ ಎಸಗಲಾಗಿದೆ. ಆಕೆ ಮಾನಸಿಕ ಮತ್ತು ದೈಹಿಕ ಹಿಂಸೆಯನ್ನು ಸಹಿಸಿಕೊಂಡು, ಅಂತಿಮವಾಗಿ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ಆರೋಪಿಯು ಇನ್ಸ್ಟಾಗ್ರಾಮ್ ಮೂಲಕ ಅಪ್ರಾಪ್ತ ಬಾಲಕಿಯೊಂದಿಗೆ ಸಂಪರ್ಕ ಸಾಧಿಸಿ, ಅವಳನ್ನು ತನ್ನ ಬಲೆಗೆ ಬೀಳಿಸಿಕೊಂಡು ನಂತರ ಅವಳನ್ನು ಶೋಷಿಸಿದ್ದಾನೆ. ತಪತಿಯಲ್ಲಿರುವ ಹೋಟೆಲ್ನಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂದು ವರದಿಗಳು ಸೂಚಿಸುತ್ತವೆ. ಹುಡುಗಿಯ ಜೀವ ಉಳಿಯುತ್ತದೆ ಎಂದು ನಾವು ಭಾವಿಸಿದ್ದೆವು. ಆದರೆ, ಅವಳು ಸಾವನ್ನಪ್ಪಿದ್ದಾಳೆ. ಆರೋಪಿಗೆ ಸಾಧ್ಯವಾದಷ್ಟು ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ.